ಮತ್ತೆ ನಾಲಿಗೆ ಹರಿಬಿಟ್ಟ ವಿವಾದಿತ ಸಂಸದ ಹೆಗಡೆ

71

ಪ್ರಜಾಸ್ತ್ರ ಸುದ್ದಿ

ಅಂಕೋಲಾ: ಸಂಸದರಾಗಿ ತಮ್ಮ ಕ್ಷೇತ್ರಕ್ಕೆ ಎಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೀರಿ ಎಂದು ಕೇಳಿದರೆ ಉತ್ತರಿಸಲು ತಡಬಡಾಯಿಸುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದ ಮಾಡುವುದರಲ್ಲಿ ಎತ್ತಿದ ಕೈ. ಸಂವಿಧಾನ ತಿದ್ದುಪಡಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲಬೇಕು ಎಂದು ಹೇಳಿದ ಸಂಸದ, ಇಂದು ಮತ್ತೊಮ್ಮೆ ನಾಲಿಗೆ ಹರಿಬಿಟ್ಟಿದ್ದಾರೆ.

ತಾಲೂಕಿನ ಹಿಲ್ಲೂರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಆನೆ ನಡೆದು ಹೋಗುವಾಗ ನಾಯಿಗಳು ಬೊಗಳುವುದು ಸಹಜ. ಅವು ಬೊಗಳಿದರೆ ಆನೆಗೆ ಗತ್ತು ಬರುತ್ತೆ ಎನ್ನುವ ಮೂಲಕ ಮಾಧ್ಯಮಗಳನ್ನು ನಾಯಿಗೆ ಹೋಲಿಸಿದ್ದಾರೆ.

ಮಾಧ್ಯಮಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುವ ವಿಷಯಗಳ ಬಗ್ಗೆ ಹೆಚ್ಚು ತಲೆ ಕೆಡಸಿಕೊಳ್ಳಬೇಡಿ. ವಿವಾದ ಸೃಷ್ಟಿಯಾಗಿದೆ ಎಂದು ವಿಚಲಿತರಾದರೆ ನಾಯಕತ್ವ ಅಲುಗಾಡುತ್ತದೆ ಎನ್ನುವ ಮೂಲಕ ತಮ್ಮ ಸಂವಿಧಾನ ತಿದ್ದುಪಡಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!