ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತುಳಿಸಿಮಾಲೆ ಧರಿಸಿದ್ರೆ ಕರೋನಾ ಬರಲ್ಲ ಎಂದು ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಹೇಳಿದ್ದಾರೆ. ಇದಕ್ಕೆ ಟ್ವೀಟರ್ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದೆ. ಪಿಎಂ ಕೇರ್ಸ್ ನಿಧಿ ಸಂಗ್ರಹಿಸಿದ್ದೇಕೆ? ಲಸಿಕೆಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇಕೆ? ಕೋವಿಡ್ ಹೆಸರಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದ್ದೇಕೆ ಎಂದು ಪ್ರಶ್ನಿಸುವ ಮೂಲಕ ವಾಗ್ದಾಳಿ ನಡೆಸಿದೆ.
ಬಿಜೆಪಿ ಸಂಸದೆ ನೀಡಿರುವ ಹೇಳಿಕೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿವೆ. ಸೋಷಿಯಲ್ ಮೀಡಿಯಾದಲ್ಲಿಯೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.