‘ನನ್ನ ಪ್ರಶ್ನೆಗೆ ಉತ್ತರ ಸಿಕ್ಕ ಬಳಿಕ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ’

90

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಲೋಕಸಭೆ ಚುನಾವಣೆಗೆ ಕೊಪ್ಪಳದ ಹಾಲಿ ಸಂಸದ ಸಂಗಣ್ಣ ಕರಡಿಗೆ ಕೈ ಬಿಡಲಾಗಿದೆ. ಹೊಸ ವ್ಯಕ್ತಿಗೆ ಟಿಕೆಟ್ ನೀಡಲಾಗಿದೆ. ಹೀಗಾಗಿ ಬಿಜೆಪಿ ನಾಯಕರ ವಿರುದ್ಧ ಸಂಗಣ್ಣ ಕರಡಿ ಕಿಡಿ ಕಾರಿದರು. ನನಗೆ ಟಿಕೆಟ್ ತಪ್ಪಿದರೂ ಸೌಜನ್ಯಕ್ಕಾದರೂ ಯಾರೂ ನನಗೆ ಫೋನ್ ಮಾಡಲಿಲ್ಲ ಎಂದಿದ್ದಾರೆ.

ಗಿಣಿಗೇರಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಯಾಕೆ ಟಿಕೆಟ್ ತಪ್ಪಿತು. ಯಾರು ತಪ್ಪಿಸಿದರು ಎನ್ನುವ ಪ್ರಶ್ನೆಗಳಿಗೆ ಉತ್ತರ ಸಿಕ್ಕ ಬಳಿಕ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುತ್ತೇನೆ. ರಾಜಕೀಯದಿಂದ ನಿವೃತ್ತಿಯಾಗುವುದಿಲ್ಲ. ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದರು.




Leave a Reply

Your email address will not be published. Required fields are marked *

error: Content is protected !!