ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಗಲಾಟೆ

76

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಹಾಲಿ ಬಿಜೆಪಿ ಸಂಸದ ಸಂಗಣ್ಣ ಕರಡಿಗೆ ಈ ಬಾರಿ ಟಿಕೆಟ್ ಕೈ ತಪ್ಪಿದೆ. ಇದರಿಂದ ಆಕ್ರೋಶಗೊಂಡಿರುವ ಅಭಿಮಾನಿಗಳು ಗುರುವಾರ ಗಲಾಟೆ ಮಾಡಿದ್ದಾರೆ. ಪಕ್ಷದ ಕಚೇರಿಗೆ ಬಂದ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಘೋಷಣೆ ಮಾಡಿರುವ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಯಾರೆಂದೂ ಪಕ್ಷದಲ್ಲಿರುವವರೆಗೂ ಗೊತ್ತಿಲ್ಲ. ಸಂಗಣ್ಣ ಕರಡಿಯವರ ರಾಜಕೀಯ ಜೀವನ ಮುಗಿಸಲು ಹುನ್ನಾರ ನಡೆಸಲಾಗಿದೆ. ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಾಗಿಲಿಗೆ ಇದ್ದ ಗ್ಲಾಸ್, ಕಿಟಕಿ ಗ್ಲಾಸ್ ಒಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಭ್ಯರ್ಥಿ ಗುಳಗಣ್ಣವರ್ ಮಾಧ್ಯಮಗೋಷ್ಠಿ ನಡೆಸುವಾಗಲೂ ಗಲಾಟೆ ಮಾಡಿದ್ದಾರೆ. ಮನೆಗೆ ಹೋಗಿ ಸಂಸದರನ್ನು ಭೇಟಿಯಾಗಿ ಮಾತನಾಡಲು ನೋಡಿದದಾರೂ ಕಾರ್ಯಕರ್ತರು ಅವಕಾಶ ನೀಡಲಿಲ್ಲ. ಒಟ್ಟಿನಲ್ಲಿ ಟಿಕೆಟ್ ಕೈ ತಪ್ಪಿದ್ದಕ್ಕೆ ಸಂಸದ ಸಂಗಣ್ಣ ಕರಡಿ ಬೆಂಬಲಿಗರು ರೊಚ್ಚಿಗೆದ್ದಿದ್ದಾರೆ.




Leave a Reply

Your email address will not be published. Required fields are marked *

error: Content is protected !!