ಮುಸ್ಲಿಂ ಅಭ್ಯರ್ಥಿ ನಿಲ್ಲಿಸಲು ಇನ್ನು ಸಮಯ ಬಂದಿಲ್ಲ: ಬಿಎಸ್ವೈ

117

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಸ್ಲಿಂ ಸಮುದಾಯದ ಸಹಕಾರ ನಮಗೆ ಬೇಕು. ಅವರ ಬಗ್ಗೆ ನಮಗೆ ವಿಶ್ವಾಸವಿದೆ. ಅವರಿಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತಾರೆ ಅನ್ನೋ ವಿಶ್ವಾಸ ಇನ್ನು ಬಂದಿಲ್ಲ. ಬಂದರೆ ಟಿಕೆಟ್ ಕೊಡುತ್ತೇವೆ ಎಂದು ಬಿಜೆಪಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್ ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಂದು, ಮುಸ್ಲಿಂರು ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಅನ್ನೋದು ನಮ್ಮ ಉದ್ದೇಶ. ನಮಗೆ ಮುಸ್ಲಿಂ ಅಭ್ಯರ್ಥಿ ನಿಲ್ಲಿಸಲು ಇನ್ನು ಸಮಯ ಬಂದಿಲ್ಲ. ಹಿಂದು ಹಬ್ಬಕ್ಕೆ ಉಚಿತ ಸಿಲಿಂಡರ್ ಭರವಸೆ ನೀಡಿದ್ದೇವೆ ಎಂದ ಮಾತ್ರಕ್ಕೆ ಮುಸ್ಲಿಂ ವಿರೋಧಿಗಳಲ್ಲ. ನಾನು ತಂದ ಭಾಗ್ಯಲಕ್ಷ್ಮಿ ಯೋಜನೆಯ ಶೇಕಡ 60ರಷ್ಟು ಫಲಾನುಭವಿಗಳು ಮುಸ್ಲಿಂರು ಎಂದರು.

ನಮ್ಮ ಸರ್ಕಾರ ಇದ್ದಾಗ ಮುಸ್ಲಿಂ ವ್ಯಕ್ತಿಗೆ ಪರಿಷತ್ ಸ್ಥಾನ ನೀಡಿ ಮಂತ್ರಿ ಮಾಡಲಾಗಿತ್ತು. ಇನ್ನು ನನ್ನನ್ನು ಕಡೆಗಣಿಸಲಾಗಿದೆ ಅನ್ನೋದು ಸುಳ್ಳು. ನಾನೇ ಸ್ವತಃ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ನನ್ನ ಮುಂದೆ ಇರುವುದು ಒಂದೇ ಗುರಿ 135 ಸ್ಥಾನ ಗೆದ್ದು ಸರ್ಕಾರ ರಚನೆ ಮಾಡುವುದು ಅಂತಾ ಹೇಳಿದರು. ಈ ವೇಳೆ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರದಾನ್, ಶೋಭಾ ಕರಂದ್ಲಾಜೆ ಸೇರಿ ಅನೇಕರು ಉಪಸ್ಥಿತರಿದ್ದರು.


TAG


Leave a Reply

Your email address will not be published. Required fields are marked *

error: Content is protected !!