ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸೋಮವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆದಿದೆ. ವಿಡಿಯೋ ಮೂಲಕ ನಡೆದ ಸಭೆಯಲ್ಲಿ ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಭಾಗವಹಿಸಿದ್ದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಿಂದ ವಿಡಿಯೋ ಸಭೆಗೆ ಹಾಜರಾಗಲಿದೆ.
ಈ ವೇಳೆ ರಾಷ್ಟ್ರೀಯ ಕಾರ್ಯಕಾರಿಣಿ ಸಭಯ ಬಗ್ಗೆ ಹಿಂದಿಯಲ್ಲಿ ಬೋರ್ಡ್ ಹಾಕುವ ಮೂಲಕ ಮತ್ತೆ ಕನ್ನಡಕ್ಕೆ ಅವಮಾನ ಮಾಡುವ ಕೆಲಸ ಮಾಡಲಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವಾಗ್ದಾಳಿ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾತ್ನಾಡ್ ಕನ್ನಡ ಅನ್ನೋ ಕಾರ್ಯಕ್ರಮ ಮಾಡಿದೆ. ನಾನು ಕನ್ನಡದಲ್ಲಿ ಮಾತನಾಡುತ್ತೇನೆ. ಕನ್ನಡದಲ್ಲಿ ವ್ಯವಹಾರ ಮಾಡುತ್ತೇನೆ ಪ್ರತಿಜ್ಞಾವಿಧಿಯನ್ನು ಈ ಸಂದರ್ಭದಲ್ಲಿ ಎಲ್ಲೆಡೆಯಿಂದ ಪಡೆಯಲಾಗಿದೆ. ಆದರೆ, ಬಿಜೆಪಿಯವರು ತಾವೇ ಕನ್ನಡಕ್ಕೆ ಕಿಮ್ಮತ್ತು ಕೊಡುವುದಿಲ್ಲವೆಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ರಾಜ್ಯ ಬಿಜೆಪಿ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಿರುವುದು ಇದೆ ಮೊದಲಲ್ಲ. ಸರ್ಕಾರದ ಕಾರ್ಯಕ್ರಮದ ಸಂದರ್ಭದಲ್ಲಿಯೂ ಕನ್ನಡವನ್ನು ಕಡೆಗಣಿಸಿ ಹಿಂದಿ ಹಾಗೂ ಇಂಗ್ಲಿಷ್ ಬ್ಯಾನರ್, ಬೋರ್ಡ್ ಹಾಕುವ ಮೂಲಕ ಹಲವು ಬಾರಿ ತ್ರಿಭಾಷಾ ಸೂತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಹೇಳಲಾಗುತ್ತಿದ್ದರೂ, ಮತ್ತೆ ಮತ್ತೆ ಅದೆ ಪುನರಾರ್ವತನೆಯಾಗುತ್ತಿರುವುದು ನಿಜಕ್ಕೂ ದುರಂತ.