ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮುಸ್ಲಿಂ ಸಮಾಜದ ಬಗ್ಗೆ ತಪ್ಪು ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ಪಕ್ಷದ ಮುಖಂಡರಿಗೆ ಪ್ರಧಾನಿ ಮೋದಿ ಸೂಚನೆ ನೀಡಿದರು. ರಾಷ್ಟ್ರೀಯ ಕಾರ್ಯಕಾರಣಿ ಸಭೆಯ 2ನೇ ದಿನದಂದು ಅವರು ಮಾತನಾಡಿ, ಎಲ್ಲ ಸಮಾಜದ, ವರ್ಗದವರನ್ನು ಭೇಟಿ ಮಾಡಿ. ಅವರು ನಮಗೆ ಮತ ನೀಡುತ್ತಾರೋ ಬಿಡುತ್ತಾರೋ ಒಟ್ಟಿನಲ್ಲಿ ಅವರನ್ನು ಭೇಟಿ ಮಾಡಿ ಎಂದರು.
ಅತಿಯಾದ ಆತ್ಮವಿಶ್ವಾಸದಿಂದ ಸೋಲಾಗಿದೆ ಎಂದು ಛತ್ತೀಸಗಡ ಹಾಗೂ ರಾಜಸ್ಥಾನದ ನಾಯಕರು ಹಾಗೂ ಕಾರ್ಯಕರ್ತರಿಗೆ ಹೇಳಿದರು. ಮೋದಿ ಬರುತ್ತಾರೆ. ಗೆಲ್ಲುತ್ತಾರೆ ಅನ್ನೋ ಮನೋಭಾವ ಬಿಡಬೇಕು. ಕಷ್ಟಪಟ್ಟು ಕೆಲಸ ಮಾಡಬೇಕು. ಯಾಕಂದರೆ ಅಧಿಕಾರದಲ್ಲಿ ಶಾಶ್ವತವಾಗಿ ಇರುತ್ತಾರೆ ಎಂದು ಭಾವಿಸರಬಾರದು ಅಂತಾ ಕಿವಿ ಮಾತು ಹೇಳಿದರು.
ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ರಾಜಸ್ಥಾನ, ಛತ್ತೀಸಗಡ ಸೇರಿದಂತೆ ವಿವಿಧ ರಾಜ್ಯಗಳ ಮುಖಂಡರು ಭಾಗವಹಿಸಿದ್ದರು.