ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮುಂಬರುವ ಹಲವು ರಾಜ್ಯಗಳ ವಿಧಾನಸಭಾ ಚುನಾವಣೆ ಹಾಗೂ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಲ್ ಸಂತೋಷ್ ಮುಂದುವರೆದಿದ್ದಾರೆ.
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಸಿ.ಟಿ ರವಿ ಅವರನ್ನು ಕೈ ಬಿಡಲಾಗಿದೆ. ಆ ಜಾಗಕ್ಕೆ ತೆಲಂಗಾಣದ ಸಂಜಯ್ ಬಂಡಿ ಅವರಿಗೆ ನೇಮಿಸಲಾಗಿದೆ. 13 ಉಪಾಧ್ಯಕ್ಷರು, 9 ಪ್ರಧಾನ ಕಾರ್ಯದರ್ಶಿಗಳು, ಸಹ ಕಾರ್ಯದರ್ಶಿ, ಕೋಶಾಧ್ಯಕ್ಷರು ಹೊಸ ಪಟ್ಟಿಯಲ್ಲಿದ್ದಾರೆ.
ಸಿ.ಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈ ಬಿಡಲಾಗಿದ್ದು, ಕರ್ನಾಟಕದ ರಾಜ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇರುವ ಪೈಪೋಟಿ ಹೆಚ್ಚಾಗಲಿದೆ.