ಕೊನೆಗೂ ಸಚಿವರಾದೇವಪ್ಪಾ…

385

ಬೆಂಗಳೂರು: ಬಿಜೆಪಿ ಸರ್ಕಾರ ರಚನೆಯಾದ 24 ಗಂಟೆಯಲ್ಲಿಯೇ ಸಚಿವರನ್ನಾಗಿ ಮಾಡ್ತೀವಿ ಎಂದು ಆಶ್ವಾಸನೆ ಕೊಟ್ಟಿದ್ದ ಸಿಎಂ ಬಿ.ಎಸ್ ಯಡಿಯೂರಪ್ಪ ತಿಂಗಳಾನುಗಟ್ಟಲೇ ಕಾಯಿಸಿದ್ರು. ಇದ್ರಿಂದ ಕಾಯ್ದು ಕಾಯ್ದು ಸಾಕಾಗಿ ಹೋಗಿದ್ದ ವಲಸೆ ನಾಯಕರು, ಕೊನೆಗೂ ಸಚಿವರಾದೇವಪ್ಪಾ ಎಂದು ನಿಟ್ಟಿಸುರು ಬಿಟ್ಟಿದ್ದಾರೆ.

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದವರು..

ಗೋಕಾಕ ಶಾಸಕ ರಮೇಶ ಜಾರಕಿಹೊಳಿ

ಕಾಗವಾಡ ಶಾಸಕ ಶ್ರೀಮಂತ ಪಾಟೀಲ

ವಿಜಯನಗರ ಶಾಸಕ ಆನಂದ ಸಿಂಗ್

ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ

ಚಿಕ್ಕಬಳ್ಳಾಪುರ ಶಾಸಕ ಡಾ.ಕೆ ಸುಧಾಕರ

ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ

ಕೆ.ಆರ್ ಪುರಂ ಶಾಸಕ ಬೈರತಿ ಬಸವರಾಜ

ಯಲ್ಲಾಪುರ ಶಾಸಕ ಶಿವರಾಂ ಹೆಬ್ಬಾರ

ಕೆ.ಆರ್ ಪೇಟೆ ಶಾಸಕ ನಾರಾಯಣಗೌಡ

ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ.ಗೋಪಾಲಯ್ಯ

ಹೀಗೆ 10 ಜನ ಶಾಸಕರು ಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜುಭಾಯಿ ವಾಲಾ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಈ ವೇಳೆ ಸಿಎಂ ಬಿ.ಎಸ್ ಯಡಿಯೂರಪ್ಪ, ಡಿಸಿಎಂಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಅಶ್ವಥನಾರಾಯಣ, ಸಚಿವರಾದ ಆರ್.ಅಶೋಕ, ಶ್ರೀರಾಮುಲು, ಜಗದೀಶ ಶೆಟ್ಟರ, ಸುರೇಶಕುಮಾರ, ಸಿ.ಟಿ ರವಿ, ಮಾಧುಸ್ವಾಮಿ, ಸಂಸದೆ ಶೋಭಾ ಕರಂದ್ಲಾಜೆ, ಅರವಿಂದ ಲಿಂಬಾವಳಿ ಸೇರಿದಂತೆ ಬಿಜೆಪಿ ನಾಯಕರು ಈ ವೇಳೆ ಭಾಗವಹಿಸಿದ್ರು. ಸಚಿವ ಸ್ಥಾನ ಸಿಗದ ಮೂಲ ಬಿಜೆಪಿಗರ ಮುಖದಲ್ಲಿ ನಗು ಮಾಯವಾಗಿದ್ದು ಕಂಡು ಬಂತು.




Leave a Reply

Your email address will not be published. Required fields are marked *

error: Content is protected !!