ರೇಣುಕಾಚಾರ್ಯಗೆ ನೋಟಿಸ್ ನೀಡಿದ ಬಿಜೆಪಿ

117

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹೊನ್ನಳ್ಳಿಯ ಬಿಜೆಪಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ನೀಡಿದೆ. ರಾಜ್ಯ ಹಾಗೂ ಕೇಂದ್ರ ನಾಯಕರ ವಿರುದ್ಧ ನೀಡುತ್ತಿರುವ ಹೇಳೀಕೆಗಳಿಗೆ ಕುರಿತಂತೆ ನೋಟಿಸ್ ನೀಡಲಾಗಿದೆ.

ಪಕ್ಷ ಹಾಗೂ ನಾಯಕರ ವಿರುದ್ಧ ಪದೆಪದೆ ಮಾತನಾಡುತ್ತಿರುವ ನಿಮ್ಮ ವಿರುದ್ಧ ಯಾಕೆ ಕ್ರಮ ತೆಗೆದುಕೊಳ್ಳಬಾರದೆಂದು ಒಂದು ವಾರದೊಳಗೆ ಲಿಖಿತ ರೂಪದಲ್ಲಿ ಉತ್ತರಿಸಿ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ನೋಟಿಸ್ ನೀಡಿದ್ದಾರೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಿಜೆಪಿ ಕಾರಣ ಏನು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಹೇಳಿಕೆಗಳನ್ನು ನೀಡಿದ ರೇಣುಕಾಚಾರ್ಯ ಅವರು, ಪಕ್ಷದ ನಾಯಕರ ವಿರುದ್ಧ ಪದೆಪದೆ ವಾಗ್ದಾಳಿ ನಡೆಸಿದ್ದಾರೆ. ಇದು ಪಕ್ಷಕ್ಕೆ ಮತ್ತಷ್ಟು ಮುಜುಗರ ಉಂಟು ಮಾಡಿದೆ ಎನ್ನಲಾಗುತ್ತಿದೆ. ಇನ್ನೊಂದು ಕಡೆ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಿದರೂ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಅನ್ನೋ ಮಾತುಗಳು ಕೇಳಿ ಬರುತ್ತಿವೆ.




Leave a Reply

Your email address will not be published. Required fields are marked *

error: Content is protected !!