ಗೃಹಜ್ಯೋತಿ ಹೆಸರಲ್ಲಿ ಕತ್ತಲಲ್ಲಿ ಕರ್ನಾಟಕ: ಕಟೀಲ್

188

ಪ್ರಜಾಸ್ತ್ರ ಸುದ್ದಿ

ಮಂಗಳೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಚುನಾವಣೆಪೂರ್ವದಲ್ಲಿ ಗ್ಯಾರೆಂಟಿಗಳಿಗೆ ಮಾನದಂಡಗಳು ಇರಲಿಲ್ಲ. ಈಗ ಎಲ್ಲದಕ್ಕೂ ಒಂದೊಂದೆ ಮಾನದಂಡಗಳನ್ನು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಗೃಹಜ್ಯೋತಿ ಹೆಸರಲ್ಲಿ ಕರ್ನಾಟಕವನ್ನು ಕತ್ತಲಲ್ಲಿ ಇಟ್ಟಿದ್ದಾರೆ. ರಾಜ್ಯದಲ್ಲಿ ಬರ ಪರಿಸ್ಥಿತಿ ಬಂದಿದೆ. ಪಂಪ್ ಸೆಟ್ ಗಳಿಗೆ ಕರೆಂಟ್ ಇಲ್ಲ. ಇದರಿಂದ ರೈತರು ಕಂಗಾಲಾಗಿದ್ದಾರೆ. ಬಿಜೆಪಿ ಈ ಬಗ್ಗೆ ಪ್ರತಿಭಟನೆ ನಡೆಸಲಿದೆ. ರಾಜ್ಯದ ರೈತರ ಬೇಡಿಕೆ ಈಡೇರಿಸದೆ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!