ಆರ್.ಅಶೋಕ್ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

128

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಅನ್ನ ಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿಯನ್ನು ಕೇಂದ್ರ ನೀಡಲು ನಿರಾಕರಿಸಿದೆ ಎಂದು ಹೇಳಿದ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ನಗರದ ಆನಂದರಾವ್ ಸರ್ಕಲ್ ಹತ್ತಿರ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಆರ್.ಅಶೋಕ್, ಜನರಿಗೆ ಸುಳ್ಳು ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಕೇಂದ್ರ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಸುಳ್ಳು ಹೇಳುತ್ತಿದೆ ಎಂದರು.

ಇನ್ನು ಕಾಂಗ್ರೆಸ್ ಸರ್ಕಾರ 10 ಅಲ್ಲ 15 ಕೆಜಿ ಅಕ್ಕಿ ಕೊಡಬೇಕು. ಈಗಾಗ್ಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಕೊಡುತ್ತಿದೆ. ಇದಕ್ಕೆ ಇವರು ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ 10 ಕೆಜಿ ಸೇರಿಸಿ 15 ಕೆಜಿ ಅಕ್ಕಿ ಕೊಡಬೇಕು ಅಂತಾ ಬಿಜೆಪಿ ನಾಯಕರು ಹೇಳಿದರು. ಈ ವೇಳೆ ಎಂಎಲ್ಸಿ ಸಿ.ರವಿಕುಮಾರ್, ಸಂಸದ ಚಲವಾದಿ ನಾರಾಯಣಸ್ವಾಮಿ ಸೇರಿ ಹಲವರಿದ್ದರು.




Leave a Reply

Your email address will not be published. Required fields are marked *

error: Content is protected !!