ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಗ್ಯಾರೆಂಟಿಗಳಿಗೆ ಷರತ್ತು ವಿಧಿಸುತ್ತಿರುವುದನ್ನು ಖಂಡಿಸಿ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆಸಿತು. ಮಾಜಿ ಸಚಿವ ಅಶ್ವತ್ಥನಾರಾಯಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾಂಗ್ರೆಸ್ ವಚನ ಭ್ರಷ್ಟ ಸರ್ಕಾರ. ಸರ್ವಾಧಿಕಾರಿ ಸರ್ಕಾರವಾಗಿದೆ. ಬಿಜೆಪಿ ಅಧಿಕಾರದಲ್ಲಿ ಜಾರಿಗೆ ತಂದ ಗೋಹತ್ಯೆ ನಿಷೇಧ ಕಾಯ್ದೆ ಮುಂದುವರೆಸಬೇಕು. ಎಲ್ಲರಿಗೂ ಉಚಿತವಾಗಿ 200 ಯುನಿಟ್ ವಿದ್ಯುತ್ ನೀಡಬೇಕು. ಯಾವುದೇ ಕಾರಣಕ್ಕೂ ವಿದ್ಯುತ್ ದರ ಹೆಚ್ಚಳ ಮಾಡಬಾರದು ಎಂದು ಹೇಳುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಅಶ್ವತ್ಥನಾರಾಯಣ, ಕಾಂಗ್ರೆಸ್ ಸರ್ಕಾರ ಬಂದು ಎರಡು ವಾರ ಆಗಿಲ್ಲ. ಆಗಲೇ ಕಾಂಗ್ರೆಸ್ ನವರು ಆಕಾಶದಲ್ಲಿ ನಡೆಯುತ್ತಿದ್ದಾರೆ. ಐದು ಗ್ಯಾರೆಂಟಿ ಭರವಸೆ ಮಾತು ತಪ್ಪಿದ್ದಾರೆ. ಫ್ರೀ ಎಂದು ಹೇಳಿ ಇದೀಗ ವಿದ್ಯುತ್ ದರ ಏರಿಕೆ ಮಾಡಿದ್ದಾರೆ. ಬೆಲೆ ಏರಿಕೆ ಮಾಡುವ ಮೂಲಕ ಡಿ.ಕೆ ಶಿವಕುಮಾರ್ ರಕ್ತ ಹೀರುವ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಸಿಎಂ ಸಿದ್ಧರಾಮಯ್ಯನವರ ಕೊಡುಗೆ ಇದೆ ಎಂದು ವಾಗ್ದಾಳಿ ನಡೆಸಿದರು.
ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಶಾಸಕ ಸಿ.ಕೆ ರಾಮಮೂರ್ತಿ, ಸಂಸದ ಪಿ.ಸಿ ಮೋಹನ್, ಎನ್.ರವಿಕುಮಾರ್, ಕೇಶವ್ ಪ್ರಸಾದ್, ಭಾಸ್ಕರ್ ರಾವ್ ಸೇರಿ ಅನೇಕರು ಉಪಸ್ಥಿತರಿದ್ದರು.