ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸದನದಿಂದ 10 ಬಿಜೆಪಿ ಸದಸ್ಯರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಶನಿವಾರ ಬಿಜೆಪಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದೆ. ಈ ಮೂಲಕ ಸ್ಪೀಕರ್ ಯು.ಟಿ ಖಾದರ್ ಅವರ ನಡೆಯನ್ನು ಖಂಡಿಸಲು ನಿರ್ಧರಿಸಲಾಗಿದೆ.
ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರ ಪ್ರತಿಭಟನೆ 2ನೇ ದಿನಕ್ಕೂ ಮುಂದುವರೆದಿದೆ. ಗುರುವಾರ ಸದನದಿಂದ ದೂರ ಉಳಿದು ವಿಧಾನಸೌಧದ ಎದುರಿನ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ನಂತರ ರಾಜ್ಯಪಾಲರಿಗೆ ದೂರು ನೀಡಿದರು. ಈ ವೇಳೆ ಜೆಡಿಎಸ್ ಸಹ ಸಾಥ್ ನೀಡಿತು.
ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನದಿಂದ ದೂರ ಉಳಿದಿದ್ದಾರೆ. ಹೀಗಾಗಿ ಅಧಿವೇಶನದ ಕೊನೆಯ ದಿನವಾದ ಇಂದು ಸದನದಲ್ಲಿ ವಿಪಕ್ಷಗಳ ಸದಸ್ಯರಿಲ್ಲದೆ ಖಾಲಿ ಖಾಲಿಯಾಗಿದೆ.