ಪ್ರಜಾಸ್ತ್ರ ಸುದ್ದಿ
ಮೈಸೂರು: ಸಮಾಜದವರು ಕಾಲೆಳೆಯುವ ಕೆಲಸ ಮಾಡುತ್ತಿರುವುದರಿಂದ ಕವಲು ದಾರಿಯಲ್ಲಿ ಸಾಗುತ್ತಿದ್ದೇವೆ. ತಂದೆ ಬಿ.ಎಸ್ ಯಡಿಯೂರಪ್ಪನವರ ವಿರುದ್ಧ ನಡೆದ ಷಡ್ಯಂತ್ರಗಳ ಬಗ್ಗೆ ಪುಸ್ತಕ ಬರೆಯುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನರಸಿಂಹರಾಜ ಕಂಠೀರವ ಸ್ಫೋರ್ಟ್ಸ್ ಕ್ಲಬ್ ನಲ್ಲಿ ಭಾನುವಾರ ವೀರಶೈವ-ಲಿಂಗಾಯತ ಸಮಾಜದವರ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, ಸಮಾಜದವರು ತಲೆ ತಗ್ಗಿಸುವಂತೆ ನಡೆದುಕೊಳ್ಳುವುದಿಲ್ಲ. ಈ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸಬೇಕು ಅಂತಾ ಕೇಳಿಕೊಂಡರು.
ಸರ್ಕಾರದ ಗ್ಯಾರಂಟಿಗಳು ಶಾಶ್ವತವಲ್ಲ. ಇನ್ನು ಕೆಲವು ತಿಂಗಳು ಕಳೆದರೆ ಸರ್ಕಾರಿ ನೌಕರರಿಗೆ ಸಂಬಗಳ ಕೊಡಲು ಆಗುವುದಿಲ್ಲ. ಬಸ್ ದರ ಜಾಸ್ತಿಯಾಗಿದೆ. ವಿದ್ಯುತ್ ದರ ಏರಿಕೆಯಾಗಿದೆ. ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಅಂತಾ ಆಕ್ರೋಶ ವ್ಯಕ್ತಪಡಿಸಿದರು.