ಬಿಜೆಪಿ-ಟಿಆರ್ ಎಸ್ ಸಂಘರ್ಷ ಜೋರು

207

ಪ್ರಜಾಸ್ತ್ರ ಸುದ್ದಿ

ಹೈದ್ರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಹಾಗೂ ಟಿಆರ್ ಎಸ್ ನಡುವಿನ ಕದನ ತಾರಕಕ್ಕೇರಿದೆ. ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ.

ದೆಹಲಿಯ ಲಿಕ್ಕರ್ ಹಗರಣದಲ್ಲಿ ಟಿಆರ್ ಎಸ್ ನಾಯಕರ ಪಾತ್ರವಿದೆ ಎಂದು ಬಿಜೆಪಿ ಆರೋಪಿಸಿದೆ. ಈ ಸಂಬಂಧ ಇಂದು ಪ್ರತಿಭಟನೆ ನಡೆಸಲು ಘಾನ್ಫುರ್ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದ್ದ ಬಿಜೆಪಿ ನಾಯಕರನ್ನು, ಕಾರ್ಯಕರ್ತರನ್ನು ಬಂಧಿಸಲಾಗಿದೆ.

ಲಿಕ್ಕರ್ ಹಗರಣದಲ್ಲಿ ಸಿಎಂ ಚಂದ್ರಶೇಖರ್ ರಾವ್ ಅವರ ಪುತ್ರಿ, ಶಾಸಕಿ ಕೆ.ಕವಿತಾ ಪಾತ್ರವಿದೆ ಎಂದು ಬಿಜೆಪಿ ಆರೋಪಿಸಿದೆ. ಹೀಗಾಗಿ ಕೆ.ಕವಿತಾ ರಾಜೀನಾಮೆ ನೀಡಬೇಕೆಂದು ಸೋಮವಾರ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು. ಇಂದು ಅದು ಮುಂದುವರೆದಾಗ ಪೊಲೀಸರು ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!