ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸರಣಿ ಕಾರು ಅಪಘಾತ

185

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಬಿಜೆಪಿ ವತಿಯಿಂದ ವಿಜಯ ಸಂಕಲ್ಪ ಯಾತ್ರೆ ನಡೆಸಲಾಗುತ್ತಿದೆ. ಸೋಮವಾರ ನಿಡಗುಂದಿ ಪಟ್ಟಣದ ಆಲಮಟ್ಟಿಯಲ್ಲಿ ಸಂಕಲ್ಪ ಯಾತ್ರೆ ನಡೆಯುತ್ತಿರುವಾಗ ಸರಣಿ ಕಾರು ಅಪಘಾತ ನಡೆದಿದೆ. ಸುಮಾರು ಐದು ಕಾರುಗಳ ನಡುವೆ ಅಪಘಾತ ಸಂಭವಿಸಿದೆ.

ಬಿಜೆಪಿ ಮುಖಂಡ ಅಪ್ಪುಗೌಡ ಮನಗೂಳಿ, ರಾಜು ನ್ಯಾಮಗೌಡ ಸೇರಿದಂತೆ ಐವರ ಕಾರು ಅಪಘಾತಗೊಂಡಿವೆ. ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿ ಆಗಿಲ್ಲ. ಆಲಮಟ್ಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!