ಬಿಜೆಪಿ 150 ಸ್ಥಾನ ಗೆಲ್ಲಲಿದೆ: ಧರ್ಮೇಂದ್ರ ಪ್ರದಾನ್

126

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಕೇಂದ್ರ ನಾಯಕರು, ಕೇಂದ್ರ ಸಚಿವರು ಒಬ್ಬರಾದ್ಮೇಲೆ ಒಬ್ಬರಂತೆ ಬರುತ್ತಿದ್ದಾರೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿವಿಧ ಕಾರ್ಯಕ್ರಮಗಳ ನಿಮಿತ್ಯ ಬಂದು ಹೋಗುತ್ತಲೇ ಇದ್ದಾರೆ. ಇಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರದಾನ್ ಆಗಮಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ. ಈ ಮೂಲಕ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು. ಇನ್ನು ಶೀಘ್ರದಲ್ಲೇ ಬಿಜೆಪಿ ಬಸ್ ಯಾತ್ರೆ ನಡೆಸಲಿದೆ. ಈ ಮೂಲಕ ಪಕ್ಷ ಸಂಘಟನೆ ಹಾಗೂ ಗೆಲುವಿಗೆ ಬೇಕಾದ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತದೆ ಎಂದರು.

ಈಗಾಗ್ಲೇ ಜೆಡಿಎಸ್ ಪಂಚರತ್ನ ಯಾತ್ರೆ ನಡೆಸಿದೆ. ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆ ನಡೆಸಿದೆ. ಇವರೊಂದಿಗೆ ಬಿಜೆಪಿಯಿಂದಲೂ ಬಸ್ ಯಾತ್ರೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!