ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮತ್ತೆ ಗೆಲ್ಲಲಿದೆ ಜನರು ನೆಮ್ಮದಿಯಾಗಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಮಾವೇಶದಲ್ಲಿ ಮಾತನಾಡಿ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ನಾಲ್ಕು ತಿಂಗಳಲ್ಲಿ ಚುನಾವಣೆ ಬರಲಿದೆ. ಜನರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಧನೆ ತಿಳಿಸುತ್ತೇವೆ. ರಾಜ್ಯದಲ್ಲಿ ನಾವು ಅಭಿವೃದ್ಧಿ ಮಾಡಿದ್ದೇವೆ. ಮನೆ ಮನೆಗೆ ಹೋಗಿ ಜನಪರ ಯೋಜನೆಗಳ ಬಗ್ಗೆ ತಿಳಿಸಬೇಕು. ಇದರಿಂದ ಮತ್ತೆ ಬಿಜೆಪಿ ಗೆಲ್ಲಲು ಸಹಕಾರಿಯಾಗುತ್ತೆ. ಆದರೆ, ಕಾಂಗ್ರೆಸ್ ಸ್ನೇಹಿತರು ಮತ್ತೆ ಅಧಿಕಾರಕ್ಕೆ ಬಂದು ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.