ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳ್ಳಿಯಲ್ಲಿ ಕಾಂಗ್ರೆಸ್ ಸೋಲು ನಿಶ್ಚಿತ ಅಂತಾ ಮಾಜಿ ಸಿಎಂ ಬಿಎಸ್ ವೈ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತ್ನಾಡಿದ ಅವರು ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ದಾಖಲಿಸಲಿದೆ ಅಂತಾ ಹೇಳಿದರು.
ಇನ್ನು ಮೈತ್ರಿ ಪಕ್ಷಗಳ ನಡುವಿನ ಆಂತರಿಕ ಗಲಾಟೆಯಿಂದಾಗಿ ಸರ್ಕಾರ ಬೀಳುತ್ತೆ. ಮೇ 23ರ ಫಲಿತಾಂಶದ ನಂತರ ರಾಜ್ಯದಲ್ಲಿ ಬದಲಾವಣೆಯಾಗುತ್ತೆ ಅಂತಾ ಹೇಳಿದರು.