ಪ್ರಜಾಸ್ತ್ರ ಸುದ್ದಿ
ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ನಡೆಸಿದ ಘಟನೆ ಸಂಬಂಧ 8 ಜನರನ್ನು ಇಂದು ಬಂಧಿಸಲಾಗಿದೆ. ಇನ್ನು ಕೆಲವರ ಬಂಧನಕ್ಕೆ ಬಲೆ ಬೀಸಲಾಗಿದೆ. ಇದಕ್ಕಾಗಿ ಒಟ್ಟು 6 ತಂಡಗಳನ್ನು ರಚಿಸಲಾಗಿದೆ.
ಸಿಎಂ ಗೃಹ ಕಚೇರಿಯನ್ನು ಧ್ವಂಸಗೊಳಿಸಿದ ಸಂಬಂಧ ಆಪ್ ಶಾಸಕ ಸೌರಭ್ ಭಾರದ್ವಾಜ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ದೆಹಲಿ ಪೊಲೀಸರ ಗೌಪ್ಯ ಸಹಭಾಗಿತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಈ ಕೃತ್ಯವೆಸಗಿದ್ದಾರೆ ಎಂದು ಶಾಸಕ ಆರೋಪಿಸಿದ್ದಾರೆ.
ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ರಾಜ್ಯ ಸರ್ಕಾರಗಳು ಟ್ಯಾಕ್ಸ್ ಫ್ರೀ ಮಾಡುತ್ತಿರುವ ಕುರಿತು ಸಿಎಂ ಕೇಜ್ರಿವಾಲ್ ವಿಧಾನಸಭೆಯಲ್ಲಿ ಮಾತನಾಡಿದ್ದರು. ಇದನ್ನು ಖಂಡಿಸಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಸಿಎಂ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.