ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗಿ ಬಗ್ಗೆ ಏನಂದರು?

185

ಪ್ರಜಾಸ್ತ್ರ ಕ್ರೀಡಾ ಸುದ್ದಿ

ಇಂಡಿಯನ್ ಕ್ರಿಕೆಟ್ ಟೀಂನ ಮಾಜಿ ನಾಯಕ, ಪುರುಷರ ರಾಷ್ಟ್ರೀಯ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಮೇ 12ರಿಂದ 15ರವರೆಗೆ ಹಿಮಾಚಲ ಪ್ರದೇಶದ ಧರ್ಮಶಾಲದಲ್ಲಿ ನಡೆಯಲಿರುವ, ಬಿಜೆಪಿ ಯುವ ಮೋರ್ಚಾ ಘಟಕದ ಸಭೆಯಲ್ಲಿ ಭಾಗವಹಿಸಲಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ದ್ರಾವಿಡ್ ಸ್ಪಷ್ಟನೆ ನೀಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ನಾನು ಭಾಗವಹಿಸುತ್ತೇನೆ ಅನ್ನೋ ಸುದ್ದಿಯಾಗಿದೆ. ಆದರೆ, ಅದು ಸತ್ಯವಲ್ಲ. ವರದಿ ತಪ್ಪಾಗಿದೆ ಎಂದು ಸ್ಪಷ್ಟಪಡಿಸುತ್ತೇನೆ ಎಂದಿದ್ದಾರೆ.

ಧರ್ಮಶಾಲದ ಬಿಜೆಪಿ ಶಾಸಕ ವಿಶಾಲ್ ನೆಹ್ರಿಯಾ, ಬಿಜೆಪಿ ಯುವ ಮೋರ್ಚಾ ಸಭೆಯಲ್ಲಿ ದ್ರಾವಿಡ್ ಭಾಗವಹಿಸುತ್ತಾರೆ. ಅವರ ಯಶಸ್ಸಿನ ಸಾಧನೆ ಯುವ ಜನತೆಗೆ ಸ್ಪೂರ್ತಿಯಾಗಲಿದೆ. ಅವರು ರಾಜಕೀಯ ಅಲ್ಲದೆ ಇತರೆ ಕ್ಷೇತ್ರದಲ್ಲಿ ಮುನ್ನಡೆಯಬಹುದು ಎಂದಿದ್ದರು. ಇದೀಗ ಸ್ವತಃ ರಾಹುಲ್ ದ್ರಾವಿಡ್, ನಾನು ಸಭೆಯಲ್ಲಿ ಭಾಗವಹಿಸುತ್ತಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!