ಪ್ರಜಾಸ್ತ್ರ ಸುದ್ದಿ
ಸಿಂದಗಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ, ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಾಣ ಅರ್ಪಿಸಿದ ವೀರರ ಸ್ಮರಣೆಗಾಗಿ ಆಗಸ್ಟ್ 19ರಂದು ಸೈಕಲ್ ಜಾಥಾ ನಡೆಸಲಾಗುತ್ತಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದ್ದಾರೆ.
ಪಟ್ಟಣದ ಬಿಜೆಪಿ ಮಂಡಲ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ತಾಲೂಕಿನ ದೇವರನಾವದಗಿಯಲ್ಲಿ ಬ್ರಿಟಿಷರಿಗೆ ಸೆರೆಸಿಕ್ಕ ವಾಸುದೇವ ಬಲರಾಮ ಫಡ್ಕೆ ಅವರ ಸ್ಮರಣೆ ಹಿನ್ನೆಲೆಯಲ್ಲಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ. ಈ ಮೂಲಕ ಯುವ ಜನತೆಯಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗ್ತಿದೆ ಎಂದರು. ಈ ಜಾಥಾಗೆ ಯುವ ಸಂಕಲ್ಪ ಯಾತ್ರೆ ಎಂದು ಹೆಸರಿಡಲಾಗಿದೆ. ಈ ವೇಳೆ ರಾಜ್ಯ ಯುವ ಮೋರ್ಚಾ ಅಧ್ಯಕ್ಷ ಡಾ.ಸಂದೀಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಂಡಲದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಅಂತಾ ತಿಳಿಸಿದ್ರು.
ಈ ವೇಳೆ ಮಲ್ಲಿಕಾರ್ಜುನ ಜೋಗುರ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಮಂಡಲ ಅಧ್ಯಕ್ಷ ಈರಣ್ಣ ರಾವೂರ, ಶಂಭುಲಿಂಗ ಕಕ್ಕಳಮೇಲಿ, ಮಲ್ಲು ಬಗಲಿ, ಬಸು ಹೂಗಾರ, ನಿಂಗರಾಜ ಬಗಲಿ, ಸುನಂದಾ ಯಂಪೂರೆ, ಸುದರ್ಶನ ಜಿಂಗಾಣಿ, ಗುರು ತಳವಾರ, ರವಿ ನಾಯ್ಕೋಡಿ, ಎಸ್.ಆರ್ ಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ರು.