ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ತೆಲಂಗಾಣದಲ್ಲಿ ಆಪರೇಷನ್ ಕಮಲ ನಡೆಸಲಾಗುತ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಟಿಆರ್ ಎಸ್ ಶಾಸಕರಿಗೆ 100 ಕೋಟಿ ರೂಪಾಯಿ ಕೊಟ್ಟು ಖರೀದಿಸುತ್ತಿದೆ ಎಂದು ಪ್ರತಿಭಟನೆ ನಡೆದಿವೆ. 15 ಕೋಟಿ ಸಮೇತ ಮೂವರನ್ನು ಪೊಲೀಸರು ಬಂಧಿಸಿದ್ದು, ಇದು ಆಪರೇಷನ್ ಕಮಲಕ್ಕೆ ಪುಷ್ಟಿ ನೀಡಿದೆ.
ಇತ್ತ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ನೂರಿನ್ನೂರು ಕೋಟಿಗೂ ಅಧಿಕ ಮೊತ್ತದ ವ್ಯವಹಾರ ನಡೆದಿದೆ. ಐಟಿ, ಇಡಿಗಳು ಇದುವರೆಗೂ ಆ ಪ್ರಕರಣವನ್ನು ಕೈಗೆತ್ತಿಕೊಂಡಲ್ಲವೇಕೆ? ಐಟಿ ಇಡಿಗಳಿಗೆ ಬಿಜೆಪಿಯವರ ಮನೆಗೆ ನುಗ್ಗಲು ಭಯವೇ ಎಂದು ಪ್ರಶ್ನಿಸಲಾಗಿದೆ.