ಅಪರಾಧಿಗಳ ಪರ ಬಿಜೆಪಿಯವರ ವಕಾಲತ್ತು: ಸಚಿವ ಗುಂಡೂರಾವ್

98

ಪ್ರಜಾಸ್ತ್ರ ಸುದ್ದಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇಂದು ಮಂಗಳೂರಿಗೆ ಭೇಟಿ ನೀಡಿದರು. ಈ ವೇಳೆ ಹಿಂದೂಪರ ಸಂಘಟನೆಯ ಮೂವರು ಕಾರ್ಯಕರ್ತರ ಗಡಿಪಾರ ವಿಚಾರ ಸಂಬಂಧ ಮಾತನಾಡಿದರು.

ಗಡಿಪಾರು ಆದವರ ಮೇಲೆ ಅನೇಕ ಪ್ರಕರಣಗಳಿವೆ. ಕಾನೂನುಬಾಹಿರ ಚಟುವಟಕೆಗಳನ್ನು ಮಾಡುತ್ತಿದ್ದಾರೆ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಹೇಳಿದ್ದೇವೆ. ಇದಕ್ಕೆ ರಾಜಕೀಯ ಬಣ್ಣ ಹಚ್ಚುವುದಲ್ಲ. ಅಪರಾಧಿಗಳ ಪರ ಬಿಜೆಪಿಯವರು ವಕಾಲತ್ತು ವಹಿಸುತ್ತಾರೆ ಎಂದರೆ ಇದಕ್ಕಿಂತ ಕೆಟ್ಟ ಸಂಗತಿ ಮತ್ತೊಂದಿಲ್ಲ ಎಂದರು.

ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ 65 ಜನರನ್ನು ಗಡಿಪಾರು ಮಾಡಲಾಗಿದೆ. ಆ ಪಟ್ಟಿಯನ್ನು ಬಿಜೆಪಿಯವರು ನೋಡಲಿ. ಧರ್ಮಕ್ಕೂ ಇದಕ್ಕೂ ಸಂಬಂಧವಿಲ್ಲ. ಇಷ್ಟಾದರೂ ಬಿಜೆಪಿಯವರು ಅಪರಾಧಿಗಳನ್ನು ಬೆಂಬಲಿಸುತ್ತಿದ್ದಾರೆ ಅಂತಾ ಕಿಡಿ ಕಾರಿದರು.




Leave a Reply

Your email address will not be published. Required fields are marked *

error: Content is protected !!