ಬಿ.ಕೆ ಹರಿಪ್ರಸಾದಗೆ ಜಮೀರ್ ಅಹ್ಮದ್ ಟಾಂಗ್

121

ಪ್ರಜಾಸ್ತ್ರ ಸುದ್ದಿ

ಮಂಡ್ಯ: ನನಗೆ ಸಿಎಂ ಆಯ್ಕೆ ಮಾಡುವುದು ಗೊತ್ತು. ಕೆಳಗೆ ಇಳಿಸುವುದು ಗೊತ್ತು ಎಂದು ಹೇಳಿದ್ದ ಕಾಂಗ್ರೆಸ್ ಎಂಎಲ್ಸಿ ವಿರುದ್ಧ ಸಚಿವರು ತಿರುಗೇಟು ನೀಡುತ್ತಿದ್ದಾರೆ. ಶನಿವಾರ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಸಿಎಂ ಆಯ್ಕೆ ಬಗ್ಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಿರ್ಧಾರ ಮಾಡುತ್ತಾರೆ ಅಂತಾ ಹೇಳಿದರು.

ಸಿಎಂ ಮಾಡುವುದು ಅವರ ಕೈಯಲ್ಲೂ ಇಲ್ಲ. ನನ್ನ ಕೈಯಲ್ಲೂ ಇಲ್ಲ. ಜೆಡಿಎಸ್, ಬಿಜೆಪಿ ಹೊಂದಾಣಿಕೆ ಬಗ್ಗೆ ಅವರನ್ನೇ ಕೇಳಿ ಅಂತಾ ಹೇಳಿದರು.

ಇದೇ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಬಿ.ಕೆ ಹರಿಪ್ರಸಾದ್, ನನಗೆ ಸಚಿವ ಕೈತಪ್ಪಿದ್ದಕ್ಕೆ ಅಸಮಾಧಾನವಿದೆ. ನನ್ನ ಹೇಳಿಕೆ ಬಗ್ಗೆ ಹೆಚ್ಚಿಗೆ ಏನೂ ಹೇಳುವುದಿಲ್ಲ. ಅದನ್ನು ವಾಪಸ್ ತೆಗೆದುಕೊಳ್ಳುವ ಜಾಯಮಾನ ನನ್ನದಲ್ಲ. ರಾಜಕೀಯದಲ್ಲಿ ಮುಂದೇನಾಗುತ್ತೆ ಕಾದು ನೋಡಿ ಅಂತಾ ಹೊಸ ಬಾಂಬ್ ಸಿಡಿಸಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!