ಬಿ.ಎಲ್ ಸಂತೋಷ್ ಪ್ರಶ್ನೆ, ಖರ್ಗೆ ಉತ್ತರ..

104

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸನಾತನ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳು ನಟ, ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ. ಪರ ವಿರೋಧದ ಅಲೆ ಎದ್ದಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಪ್ರಶ್ನೆಗೆ ಸಚಿವ ಪ್ರಿಯಾಂಕ್ ಖರ್ಗೆ ಉತ್ತರ ನೀಡಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್ ನಲ್ಲಿ ಯಾರಿಗಾದರೂ ಹೊಟ್ಟೆಯ ಯಾವುದೇ ಭಾಗದಲ್ಲಿ ಸೋಂಕಿದ್ದರ  ಅವರ ತಲೆ ಕತ್ತರಿಸುತ್ತೀರಾ? ಎಂದು ಬಿ.ಎಲ್ ಸಂತೋಷ್ ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರಿಯಾಂಕ್ ಖರ್ಗೆ ಬಸವಣ್ಣನವರ ವಚನದ ಮೂಲಕ ಉತ್ತರಿಸಿದ್ದಾರೆ.

ಸೋಂಕಿಗೆ ಚಿಕಿತ್ಸೆ ಬೇಕು ಎಂಬ ನಿಮ್ಮ ವಾದವನ್ನು ಒಪ್ಪುತ್ತೇನೆ. ಆದರೆ ಸಾವಿರಾರು ವರ್ಷಗಳಿಂದ ಬಹಳಷ್ಟು ಸೋಂಕುಗಳು ಈ ಸಮಾಜವನ್ನು ಕಾಡುತ್ತಿವೆ. ಆ ಸೋಂಕುಗಳು ಈಗಲೂ ಮುಂದುವರೆದಿದ್ದು, ಮನುಷ್ಯರ ನಡುವೆ ತಾರತಮ್ಯ ಸೃಷ್ಟಿಸುವೆ. ಮನುಷ್ಯರ ಅನ್ನೋ ಘನತೆ ನೀಡಲು ನಿರಾಕರಿಸಿವೆ ಎಂದು ಸುದೀರ್ಘವಾಘಿ ಬರೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!