ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಮಲ್ಲೇಶ್ವರ ನಿವಾಸಿ ಇಂಜನಿಯರಿಂಗ್ ವಿದ್ಯಾರ್ಥಿನಿ ಕುಸುಮಿತಾ ಮೃತ ದುರ್ದೈವಿ.
ನಗರದ ಹರಿಶ್ಚಂದ್ರಘಾಟ ಹತ್ತಿರ ಅಪಘಾತ ನಡೆದಿದೆ. ವಿದ್ಯಾರ್ಥಿನಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಕಾಲೇಜಿಗೆ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ದುರಂತ ನಡೆದಿದೆ.