ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜರಾಜೇಶ್ವರಿ ಬಸ್ ಡಿಪೋ 21ರ ಬಿಎಂಟಿಸಿ ಬಸ್ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಳೆಬಸಪ್ಪ ಅನ್ನೋ ಚಾಲಕ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.
ಮೇಲಾಧಿಕಾರಿಗಳ ಕಿರುಕುಳದಿಂದ ಚಾಲಕ ಹೊಳೆಬಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ಪ್ರಕರಣ ಕಳೆದ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಹಿಂದೆಯೂ ಅನೇಕ ಬಿಎಂಟಿಸಿ ನೌಕರರು ಆತ್ಮಹತ್ಯೆಯ ಹಾದಿ ಹಿಡಿದ ಘಟನೆಗಳು ನಡೆದಿವೆ.