ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಧಾನಸೌಧ ಮುಂಭಾಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ 100 ವಿದ್ಯುತ್ ಚಾಲಿತ ಬಿಎಂಟಿಸಿ ಬಸ್ ಗಳಿಗೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದಾಗಿ ಬೆಂಗಳೂರಿನಲ್ಲಿ ನಿತ್ಯ 40 ಲಕ್ಷ ಮಹಿಳೆಯರು ಸಂಚರಿಸುತ್ತಿದ್ದಾರೆ ಎಂದರು.
2024 ಏಪ್ರಿಲ್ ತಿಂಗಳೊಳಗೆ ಬಿಎಂಟಿಸಿಗೆ 1,400 ವಿದ್ಯುತ್ ಚಾಲಿತ ಬಸ್ ಗಳನ್ನು ಪೂರೈಕೆ ಮಾಡಲಾಗುವುದು. ಉಚಿತ ಪ್ರಯಾಣ ಯೋಜನೆಯಲ್ಲಿ ಎಲ್ಲ ಜಾತಿ, ಧರ್ಮ, ಅಂತಸ್ತಿನ ಮಹಿಳೆಯರಿದ್ದಾರೆ. ಬಿಜೆಪಿಯವರು ಟೀಕಿಸುತ್ತಾರೆ. ಆದರೆ, ಅವರ ಸರ್ಕಾರದಲ್ಲಿ ಇಂತಹ ಯೋಜನೆಗಳನ್ನು ಯಾಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದರು.
ಡಿಸಿಎಂ ಡಿ.ಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಶಾಸಕ ರಿಜ್ವಾನ್ ಅರ್ಷದ್ ಮಾತನಾಡಿದರು. ವಿವಿಧ ಇಲಾಖೆಗಳ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ಉಪ ಸ್ಥಿತರಿದ್ದರು.