ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬೃಹತ್ ಬೆಂಗಳೂರು ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರು, ನಿರ್ದೇಶಕರ ನಕಲಿ ಸಹಿ ಮಾಡಿ ಬರೋಬ್ಬರಿ 79 ಲಕ್ಷ ರೂಪಾಯಿ ವಂಚನೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ 11 ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಗುತ್ತಿಗೆದಾರರ ಜೊತೆಗೆ ಶಾಮೀಲವಾಗಿ ಅಧಿಕಾರಿಗಳೇ ಈ ರೀತಿ ವಂಚನೆ ಮಾಡಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಬಿಎಂಟಿಸಿ ವಾಣಿಜ್ಯ ವಿಭಾಗದ ಮುಖ್ಯ ಸಂಚಾರಿ ಸೇರಿ 11 ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಸೂರ್ಯಸೇನ್, ಅನ್ಬುಕುಮಾರ್, ಸಿ.ಶಿಖಾ, ರೇಜು, ಕೆ.ಅರುಣ್, ಶ್ರೀರಾಮ್ ಮುಲ್ಕಾವನ್, ಬಿ.ಕೆ ಮಮತ, ಶ್ಯಾಮಲಾ, ಅನಿತಾ, ಸತೀಶ್, ಪ್ರಕಾಶ್ ಕೊಪ್ಪಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬಿಎಂಟಿಸಿ ಟೆಂಡರ್ ಗಳು, ವಾಣಿಜ್ಯ ಮಳಿಗೆಗಳ ಹಂಚಿಕೆ, ಫ್ಲ್ಯಾಟ್ ಅವಧಿ ವಿಸ್ತರಣೆ ಸಂಬಂಧ ದಾಖಲೆಗಳಿಗೆ ಎಂ.ಡಿ ಹೆಸರಲ್ಲಿ ನಕಲಿ ಸಹಿ ಮಾಡಿ ವಂಚಿಸಿದ್ದಾರೆ.