ಪ್ರಜಾಸ್ತ್ರ ಸುದ್ದಿ
ತಿರುವನಂತಪುರಂ: ಮಲ್ಲಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸಂಭವಿಸಿದ ದೋಣಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 23ಕ್ಕೆ ಏರಿಕೆಯಾಗಿದೆ. ಮೃತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು, ಮಹಿಳೆಯರು ಇದ್ದಾರೆ ಎಂದು ಹೇಳಲಾಗುತ್ತಿದೆ.
40 ಪ್ರಯಾಣಿಕರನ್ನು ಹತ್ತುಕೊಂಡು ಹೋಗುತ್ತಿದ್ದ ಬೋಟ್ ದಡದಿಂದ 300 ಮೀಟರ್ ದೂರದಲ್ಲಿ ಹೋಗುವಷ್ಟರಲ್ಲಿ ಮಗುಚಿದೆ. 11 ಮಂದಿಯನ್ನು ರಕ್ಷಿಸಲಾಗಿದೆ. 7 ಜನರ ಸ್ಥಿತಿ ಗಂಭೀರವಾಗಿದೆ. ಭಾನುವಾರವಾಗಿದ್ದರಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಯಾವುದೇ ಸುರಕ್ಷಾ ಕ್ರಮಗಳನ್ನು ಕೈಗೊಂಡಿರಲಿಲ್ಲವೆಂದು ತಿಳಿದು ಬಂದಿದೆ.
ಘಟನೆ ಸಂಬಂಧ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕೇರಳ ಸಿಎಂ ಪಿಣಿರಾಯನ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.