ಪ್ರಜಾಸ್ತ್ರ ಸುದ್ದಿ
ಧಾರವಾಡ: ಇಲ್ಲಿನ ನವ ನಗರದ ನಿವಾಸಿ ಲೋಕೋಪಯೋಗಿ ಇಲಾಖೆಯ ನಿವೃತ್ತ ಉದ್ಯೋಗಿ ರೇಖಾ.ಬಿ ಹಾವೇರಿ(71) ಅವರು ಜೂನ್ 7ರಂದು ಮಧ್ಯರಾತ್ರಿ ನಿಧನರಾಗಿದ್ದಾರೆ. ಇವರ ಇಚ್ಛೆಯಂತೆ ಕುಟುಂಬಸ್ಥರು ದೇಹದಾನ ಮಾಡಿದ್ದಾರೆ.
ಪತಿ ಹಾಗೂ ಮೂವರು ಹೆಣ್ಣು ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿರುವ ರೇಖಾ, ಧಾರವಾಡದ ಎಸ್ ಡಿಎಂ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದೇಹದಾನ ಮಾಡುವ ಕುರಿತು 2018ರಲ್ಲಿ ನೋಂದಾಯಿಸಿಕೊಂಡಿದ್ದರು. ಅದರಂತೆ ಕುಟುಂಬಸ್ಥರು ಅವರ ಮೃತದೇಹವನ್ನು ದಾನ ಮಾಡುವ ಮೂಲಕ ಸಾರ್ಥಕತೆಯನ್ನು ಮೆರೆಯಲಾಗಿದೆ.