ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಾಯ್ಲರ್ ಸ್ಫೋಟದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಮಾಗಡಿ ರಸ್ತೆಯ ಗೋಪಾಲಪುರದ 5ನೇ ಅಡ್ಡರಸ್ತೆಯಲ್ಲಿನ ತಿಂಡಿ ತಯಾರಿಕೆ ಘಟಕದಲ್ಲಿ ಈ ಘಟನೆ ನಡೆದಿದೆ.
ಬಿಹಾರ್ ಮೂಲದ ಮನೀಶ್ ಕುಮಾರ್ ಹಾಗೂ ಸೌರವ್ ಮೃತಪಟ್ಟಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಧನಲಕ್ಷ್ಮಿ, ಸಚಿನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟಕದ ಮಾಲೀಕ ಸಚಿನ್ ಸಹ ಘಟನೆಯಲ್ಲಿ ಮೃತಪಟ್ಟಿದ್ದಾರೆ.