ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ
ಇಸ್ಲಾಮಾಬಾದ್: ಪಾಕಿಸ್ತಾನದ ಪೇಶಾವರದಲ್ಲಿರುವ ಮಸೀದಿವೊಂದರ ಹತ್ತಿರ ಬಾಂಬ್ ದಾಳಿ ನಡೆಸಲಾಗಿದ್ದು, 28 ಜನರು ಮೃತಪಟ್ಟರೆ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮಸೀದಿಯಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಈ ಕೃತ್ಯ ನಡೆಸಲಾಗಿದೆ.
ಲೇಡಿ
ರೀಡಿಂಗ್ ಹಾಸ್ಟೆಟಲ್ ವಕ್ತಾರ ಮೊಹಮ್ಮದ್ ಅಸಿಮ್ ಅವರ ಪ್ರಕಾರ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ
ದಾಖಲಿಸಲಾಗಿದೆ. ಘಟನೆ ನಡೆದ ಪ್ರದೇಶವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದ್ದು, ಆಂಬ್ಯುಲೆನ್ಸ್ ಗೆ
ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಯನ್ನು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಖಂಡಿಸಿದ್ದಾರೆ. ಉಗ್ರರ ಕೃತ್ಯವನ್ನು ಖಂಡಿಸುತ್ತೇವೆ. ಮೃತರ ಕುಟುಂಬಸ್ಥರಿಗೆ ಸಂತಾಪಗಳನ್ನು ತಿಳಿಸುತ್ತೇನೆ. ಗಾಯಾಳುಗಳ ಗುಣಮುಖರಾಗಲು ಪ್ರಾರ್ಥಿಸಿಕೊಳ್ಳುತ್ತೇನೆ. ಹೆಚ್ಚಾಗುತ್ತಿರುವ ಉಗ್ರರ ಬೆದರಿಕೆಗಳನ್ನು ಮಟ್ಟ ಹಾಕಲು ನಮ್ಮ ಗುಪ್ತಚರ ಹಾಗೂ ಪೊಲೀಸ್ ಇಲಾಖೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವುದು ಅವಶ್ಯಕವಾಗಿದೆ ಎಂದಿದ್ದಾರೆ.