ಪ್ರಜಾಸ್ತ್ರ ಸುದ್ದಿ
ಕೊಲ್ಕತ್ತಾ: ಬಾಂಬ್ ಸ್ಫೋಟದಲ್ಲಿ ಬಾಲಕನೊಬ್ಬ ಮೃತಪಟ್ಟ ಘಟನೆ ಪಶ್ಚಿಮ ಬಂಗಳಾದ ಹೊಘ್ಲಿ ಜಿಲ್ಲೆಯ ಪಂಡುವಾದಲ್ಲಿ ನಡೆದಿದೆ. ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಳದ ಹತ್ತಿರ ಮಕ್ಕಳು ಆಟವಾಡುತ್ತಿದ್ದಾಗ ಬಾಂಬ್ ಸ್ಫೋಟಿಸಲಾಗಿದೆ. ಇದರ ಹಿಂದೆ ಟಿಎಂಸಿ ಕೈವಾಡವಿದೆ ಪಂಡುವಾದಲ್ಲಿ ಸಮಾವೇಶಕ್ಕೂ ಮೊದಲು ಸಾರ್ವಜನಿಕರಲ್ಲಿ ಭಯ ಮೂಡಿಸಲು ಹೀಗೆ ಮಾಡಲಾಗಿದೆ ಎಂದು ಸಂಸದೆ ಲಾಕೆಟ್ ಚಟರ್ಜಿ ಆರೋಪಿಸಿದ್ದಾರೆ.