ಬಾಂಬ್ ಬೆದರಿಕೆ: ಬಂಧನಕ್ಕೆ ಸಿಎಂ ಸೂಚನೆ

551

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯ ಸುಮಾರು 6 ಖಾಸಗಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇ ಮೇಲ್ ಮೂಲಕ ಬೆದರಿಕೆ ಹಾಕಿದ ಘಟನೆ ಇಂದು ನಡೆದಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಈ ರೀತಿಯಾಗಿ ಮಾಡಿದ್ದಾರೋ ಕೂಡಲೇ ಅಂತವರನ್ನು ಪತ್ತೆ ಹಚ್ಚಿ ಬಂಧಿಸುವಂತೆ ಸೂಚನೆ ನೀಡಿದ್ದಾರೆ.

ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ. ಪ್ರಗತಿ ಹೊಂದುತ್ತಿರುವ ರಾಜ್ಯಕ್ಕೆ ಕೆಟ್ಟ ಹೆಸರು ತರುವ ಕೆಲಸ. ಇದರಿಂದ ಯಾರೂ ಭಯ ಪಡುವ ಅಗತ್ಯವಿಲ್ಲ. ಎಲ್ಲ ರೀತಿಯ ತನಿಖೆ ನಡೆಯುತ್ತಿದೆ. ಇದನ್ನು ಗಂಭೀರವಾಗಿ ತೆಗೆದುಕೊಂಡು ಪೊಲೀಸ್ ಇಲಾಖೆ ತಪಾಸಣೆ ನಡೆಸಿದೆ ಎಂದರು.




Leave a Reply

Your email address will not be published. Required fields are marked *

error: Content is protected !!