ರಾಜ ಭವನಕ್ಕೆ ಬಾಂಬ್ ಬೆದರಿಕೆ ಕರೆ

245

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿನ ಸ್ಕೂಲ್ ಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿರುವ ಘಟನೆ ಮಾಸುವ ಮುನ್ನವೇ ರಾಜ ಭವನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಸೋಮವಾರ ರಾತ್ರಿ ಸುಮಾರು 11.40ರ ಹೊತ್ತಿಗೆ ಕಾಲ್ ಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ.

ರಾಜಭವನ ಸಿಬ್ಬಂದಿ ವಿಧಾನಸೌಧ ಠಾಣೆಗೆ ಫೋನ್ ಮಾಡಿ ಮಾಹಿತಿ ನೀಡಿದ್ದಾರೆ. ಉಪ್ಪಾರ ಪೊಲೀಸ್ ಠಾಣೆ ವ್ಯಾಪ್ತಿಯಿಂದ ಬೆದರಿಕೆ ಕರೆ ಬಂದಿದೆ ಎಂದು ತಿಳಿದು ಬಂದಿದ್ದು, ಓರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಮಾನಸಿಕ ಅಸ್ವಸ್ಥನಂತೆ ನಡೆದುಕೊಳ್ಳುತ್ತಿದ್ದಾನಂತೆ.

ಬಾಂಬ್ ಬೆದರಿಕೆ ಕರೆಯಲ್ಲಿ ಸಿಕ್ಕಿ ಹಾಕಿಕೊಂಡ ಸಂದರ್ಭದಲ್ಲಿ ಆರೋಪಿಗಳು ಮಾನಸಿಕ ಅಸ್ವಸ್ಥರಂತೆ ವರ್ತಿಸುವುದು, ಮಾನಸಿಕ ಖಿನ್ನತೆಗೆ ಒಳಗಾದವಂತೆ ನಡೆದುಕೊಳ್ಳುವುದು ಕಂಡು ಬರುತ್ತಿದೆ. ಡಿಸೆಂಬರ್ 1ರಂದು 15 ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದಕ್ಕೂ ಮೊದಲು ಟಾಟಾ ಕನ್ಸಲ್ ಟೆನ್ಸಿ ಕಚೇರಿಗೆ ಮಾಜಿ ಸಿಬ್ಬಂದಿ ಬಾಂಬ್ ಬೆದರಿಕೆ ಮಾಡಿದ್ದಳು. ಹೀಗೆ ಒಂದಲ್ಲ ಒಂದು ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದು ಆತಂಕ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!