ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಟಾಟಾ ಕನ್ಸಲ್ ಟೆನ್ಸಿ ಸರ್ವಿಸ್ ಸಂಸ್ಥೆಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ಅಲ್ಲಿನ ಸಿಬ್ಬಂದಿ ಗಾಬರಿಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಪರಪ್ಪನ ಅಗ್ರಹಾರ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
ಬಾಂಬ್ ನಿಷ್ಕ್ರೀಯ ದಳದವರಿಗೂ ಮಾಹಿತಿ ನೀಡಲಾಗಿದೆ. ಕಂಪನಿಯ ಬಿ ಬ್ಲಾಕ್ ನಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಬಂದಿದೆ. ಇದು ಮಾಜಿ ಉದ್ಯೋಗಿಯ ಕೈವಾಡ ಇರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.