ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ

246

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಗೆ ಬಾಂಬ್ ಬೆದರಿಕೆಯೊಂದು ಬಂದಿದೆ. ಇದರಿಂದಾಗಿ ಸೋಮವಾರ ಶಾಲೆಗೆ ರಜೆ ಘೋಷಿಸಲಾಗಿದೆ. ಹುಚ್ಚ ವೆಂಕಟ್ ಹೆಸರಿನಲ್ಲಿ ಬಾಂಬ್ ಬೆದರಿಕೆಯ ಮೇಲ್ ಬಂದಿದೆ.

ಆರ್.ಆರ್ ನಗರದಲ್ಲಿರುವ ನ್ಯಾಷನಲ್ ಹಿಲ್ ವ್ಯೂ ಪಬ್ಲಿಕ್ ಶಾಲೆಯ 3ನೇ ಯುನ್ಯೂಟ್ ಗೆ ಬಾಂಬ್ ಇಡುವುದಾಗಿ ಭಾನುವಾರ ಸಂಜೆ ಮೇಲ್ ಬಂದಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಆರ್.ಆರ್ ನಗರ ಠಾಣೆ ಪೊಲೀಸರು, ಬಾಂಬ್ ನಿಷ್ಕ್ರೀಯ ದಳದವರು ಆಗಮಿಸಿ ಪರಿಶೀಲನೆ ನಡೆಸಿದೆ.

ಈ ಬಗ್ಗೆ ಡಿಕೆ ಶಿವಕುಮಾರ್ ಹಾಗೂ ಅವರ ಮಗಳು ಐಶ್ವರ್ಯ ಮಾತನಾಡಿದ್ದು, ಯಾರೂ ಭಯ ಪಡುವ ಅಗತ್ಯವಿಲ್ಲ. ಹೈಸೆಕ್ಯೂರಿಟಿ ಇದೆ. ಸಿಸಿಟಿವಿಯಲ್ಲಿ ಎಲ್ಲವೂ ರೆಕಾರ್ಡ್ ಆಗುತ್ತಿದೆ. ನಿನ್ನೆ ಒಂದು ಪರೀಕ್ಷೆ ಇತ್ತು. ಹೀಗಾಗಿ ಬೇರೆಯವರಿಗೆ ಬರಲು ಅವಕಾಶ ನೀಡಲಾಗಿತ್ತು. ಆದರೆ, ಯಾರೂ ಭಯ ಪಡುವ ಅಗತ್ಯವಿಲ್ಲ. ಎಲ್ಲ ಮಕ್ಕಳು ಸೇಫ್ ಆಗಿದ್ದಾರೆ. 1-5ನೇ ತರಗತಿ ಮಕ್ಕಳನ್ನು ಮನೆಗೆ ಕಳುಹಿಸಿ ಕೊಡಲಾಗಿದೆ ಎಂದಿದ್ದಾರೆ. ಈ ಶಾಲೆಯಲ್ಲಿ ಬರೋಬ್ಬರಿ 4 ಸಾವಿರ ಮಕ್ಕಳು ಓದುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!