ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಸಿಂದಗಿ: ನೆಲೆ ಪ್ರಕಾಶನ ವತಿಯಿಂದ ಶನಿವಾರ ಸಂಜೆ 4 ಗಂಟೆಗೆ ಕಲ್ಯಾಣ ನಗರದಲ್ಲಿ ಹಿರಿಯ ಕಥೆಗಾರ ಡಾ.ಚನ್ನಪ್ಪ ಕಟ್ಟಿ ಅವರ ಸಿತಾಳ ಬಿಂದಿಗೆ ಕೃತಿ ಲೋಕಾರ್ಪಣೆಗೊಳ್ಳಲಿದೆ. ಸಿಪಿಐ ಹುಲಗಪ್ಪ.ಡಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಇಂಡಿಯ ಸಾಹಿತಿ ಚದಂಬರ ಬಂಡಗರ ಕೃತಿಯ ಕುರಿತು ಮಾತನಾಡಲಿದ್ದಾರೆ. ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ, ಶಿವಪ್ಪಣ್ಣ ಗವಸಾನೆ ಮುಖ್ಯ ಅತಿಥಿಗಳಾಗಿದ್ದು, ಹಿರಿಯ ಜಾನಪದ ವಿದ್ವಾಂಸ ಡಾ.ಎಂ.ಎಂ ಪಡಶೆಟ್ಟಿ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.
ಇದೆ ವೇಳೆ ಕವಿಗೋಷ್ಠಿ ನಡೆಯಲಿದೆ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹ.ಮ ಪೂಜಾರ ಕವಿಗೋಷ್ಠಿ ಉದ್ಘಾಟಿಸಲಿದ್ದಾರೆ. 12 ಕವಿ, ಕವಿಯತ್ರಿಯರು ಕವನ ವಾಚನ ಮಾಡಲಿದ್ದಾರೆ.