ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಂಗಡಿಯಲ್ಲಿ ಹಣ ಕದ್ದಿದ್ದಾನೆ ಎಂದು ಹೇಳಿ ಬಾಲಕನೊಬ್ಬನಿಗೆ ಅಂಗಡಿ ಮಾಲೀಕ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಗರ ಉಪ್ಪಾರಸಿರಿಯಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.
ಕಳೆದ 6 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗ್ತಿದೆ. ಮಾರ್ಚ್ 16ರಂದು ಹಣ ಕಳ್ಳತನ ಮಾಡಿದ್ದಾನೆ ಅನ್ನೋ ಆರೋಪದಲ್ಲಿ ಅಂಗಡಿ ಮಾಲೀಕ ಹೊಡಿದ್ದಾನೆ ಎಂದು ಬಾಲಕ, ಆಸ್ಪತ್ರೆಯಲ್ಲಿದ್ದಾಗ ಹೇಳಿದ್ದ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.