ದೇವರಹಿಪ್ಪರಗಿ: ತಾಲೂಕಿನ ಚಿಕ್ಕರೂಗಿ ಗ್ರಾಮದಲ್ಲಿ ನಿನ್ನೆ ಸಂಜೆ ಅನಾಹುತ ಸಂಭವಿಸಿ ಬಾಲಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಗ್ರಾಮದ ರಾಕೇಶ ರತ್ನಾಕರ ಅನ್ನೋ ಹುಡುಗ, ನೀರು ತರಲು ಹೋದಾಗ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ.
10ನೇ ತರಗತಿ ಓದುತ್ತಿದ್ದ 16 ವರ್ಷದ ರಾಕೇಶ ಈರಪ್ಪ ರತ್ನಾಕರ ಅನ್ನೋ ಬಾಲಕ ಸಂಜೆ ನೀರು ತರಲು ಸಾರ್ವಜನಿಕ ಬಾವಿಗೆ ಹೋದಾಗ ಈ ದುರ್ಘಟನೆ ಸಂಭವಿಸಿದೆ. ಈ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿಯ ಸಾವು ಗ್ರಾಮದಲ್ಲಿ ನೀರವ ಮೌನಕ್ಕೆ ಕಾರಣವಾಗಿದೆ. ಮಗನನ್ನ ಕಳೆದುಕೊಂಡ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.