ಕಲಬುರಗಿಯಲ್ಲಿ ಬಾಲಕನ ಕಿಡ್ನಾಪ್ ಕೇಸ್ ಸುಖಾಂತ್ಯ

339

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ನಾಲ್ಕನೇ ತರಗತಿ ಓದುತ್ತಿರುವ ಬಾಲಕನನ್ನು ಅಪಹರಣ ಮಾಡಿದ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ನಾಗೂರ ಗ್ರಾಮದಲ್ಲಿ ನಡೆದಿತ್ತು. ಗ್ರಾಮದ ಸರ್ಕಾರಿ ಶಾಲೆ ಶಿಕ್ಷಕ ಗುರುನಾಥ್ ರಾಠೋಡ ಎಂಬುವರ ಮಗ ಸುದರ್ಶನ್ ನನ್ನು ಅಪಹರಿಸಲಾಗಿತ್ತು. ಈ ಪ್ರಕರಣ ಸುಖಾಂತ್ಯ ಕಂಡಿದೆ.

ಬೆಳಿಗ್ಗೆ ಶಾಲೆಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಬಾಲಕನನ್ನು ಅಪಹರಿಸಿದ್ದಾರೆ. ನಂತರ ಶಿಕ್ಷಕನಿಗೆ ಫೋನ್ ಮಾಡಿ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಿದರೆ ಮಗನನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ.

ಗುರುನಾಥ್ ವಿಶ್ವವಿದ್ಯಾಲಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಅಲರ್ಟ್ ಆಗಿ ಎಲ್ಲೆಡೆ ಹುಡುಕಲು ಶುರು ಮಾಡಿದ್ದಾರೆ. ಅತ್ತ ತಂದೆಗೆ ಕಾಲ್ ಮಾಡಿ ಹಣವನ್ನು ಅವರು ಹೇಳಿದ ಜಾಗದಲ್ಲಿ ಇಟ್ಟು ಹೋಗಲು ಹೇಳಿದ್ದಾರೆ. ಅದರಂತೆ ಆತ ಮಾಡಿದ್ದಾನೆ. ಮತ್ತೊಂದು ಕಡೆ ಪೊಲೀಸರು ಮಫ್ತಿಯಲ್ಲಿ ಬಾಲಕನ ಪತ್ತೆ ಕಾರ್ಯ ನಡೆಸಿದ್ದಾರೆ. ಅದೇನಾಗಿದೆಯೋ ಗೊತ್ತಿಲ್ಲ ನಿರ್ಜನ ಪ್ರದೇಶದಲ್ಲಿ ಬಾಲಕನನ್ನು ಬಿಟ್ಟು ಪರಾರಿಯಾಗಿದ್ದಾರೆ.

ನಂತರ ಬಾಲಕ ಹೇಗೆ ತಪ್ಪಿಸಿಕೊಂಡು ಬಂದು ಕೆಲವರ ಕೈಗೆ ಸಿಕ್ಕಿದ್ದಾನೆ. ಅವರು ಆತನ ತಂದೆಗೆ ಕಾಲ್ ಮಾಡಿ ನಿಮ್ಮ ಮಗ ನಮ್ಮ ಬಳಿ ಇದ್ದಾನೆ. ಸುರಕ್ಷಿತವಾಗಿದ್ದಾನೆ. ಬಂದು ಕರೆದುಕೊಂಡು ಹೋಗಿ ಎಂದಿದ್ದಾರೆ. ಅದರಂತೆ ಪೋಷಕರು, ಪೊಲೀಸರು ಹೋಗಿ ಬಾಲಕನನ್ನು ಕರೆದುಕೊಂಡು ಬಂದಿದ್ದು, ಪ್ರಕರಣ ಸುಖಾಂತ್ಯ ಕಂಡಿದೆ.




Leave a Reply

Your email address will not be published. Required fields are marked *

error: Content is protected !!