ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಬಾಲಕ ಬಲಿ

179

ಪ್ರಜಾಸ್ತ್ರ ಸುದ್ದಿ

ಮೈಸೂರು: ಚಿರತೆ ದಾಳಿಯಿಂದ ಬಾಲಕನೊಬ್ಬ ಭೀಕರವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಹೊರಹಳ್ಳಿಯಲ್ಲಿ ನಡೆದಿದೆ. 11 ವರ್ಷದ ಬಾಲಕ ಸಂಜಯ್ ಚಿರತೆ ದಾಳಿಗೆ ಬಲಿಯಾದ ದುರ್ದೈವಿ.

ಕಳೆದ ರಾತ್ರಿಯಿಂದ ಬಾಲಕ ಸಂಜಯ್ ನಾಪತ್ತೆಯಾಗಿದ್ದ. ಕುಟುಂಬಸ್ಥರು, ಊರಿನವರು ಎಲ್ಲಡೆ ಹುಡುಕಾಟ ನಡೆಸಿದ್ದರೂ ಎಲ್ಲಿಯೂ ಪತ್ತೆಯಾಗಿರಲಿಲ್ಲ. ಆದರೆ, ಇಂದು ಬೆಳಗ್ಗೆ ರುಂಡವಿಲ್ಲದ ಬಾಲಕನ ಮೃತದೇಹ ಪತ್ತೆಯಾಗಿದೆ.

ಚಿರತೆ ಬಾಲಕನನ್ನು ಕೊಂದು ರುಂಡವನ್ನು ತಿಂದು ಹಾಕಿದೆ. ಈ ಘಟನೆ ಇಡೀ ಗ್ರಾಮದಲ್ಲಿ ಭಯದ ವಾತಾವರಣ ಮತ್ತಷ್ಟು ಹೆಚ್ಚಿಸಿದೆ. ಯಾಕಂದರೆ, ಇದುವರೆಗೂ ಚಿರತೆ ದಾಳಿಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಪರಿಸ್ಥಿತಿ ಹೇಳತೀರದಾಗಿದೆ. ಅರಣ್ಯ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!