ಪ್ರಜಾಸ್ತ್ರ ಅಪರಾಧ ಸುದ್ದಿ
ವಿಜಯಪುರ: ಗುಮ್ಮಟನಗರಿಯಲ್ಲಿ ಕಳೆದ ರಾತ್ರಿ ಯುವಕನೊಬ್ಬನ ಕೊಲೆಯಾದ ಘಟನೆ ನಗರದ ಝಂಡಾ ಕಟ್ಟಿ ಹತ್ತಿರ ನಡೆದಿದೆ. ಸಾಹಿಲ್ ಭಾಂಗಿ(21) ಕೊಲೆಯಾದ ಯುವಕ.
ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಗೋಳಗುಮ್ಮಟ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.