ಪ್ರಜಾಸ್ತ್ರ ಅಪರಾಧ ಸುದ್ದಿ
ದಕ್ಷಿಣ ಕನ್ನಡ: ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ಬುಧವಾರ ತಡರಾತ್ರಿ ಉಳ್ಳಾಲದಲ್ಲಿ ನಡೆದಿದೆ. 28 ವರ್ಷದ ವರುಣ್ ಕೊಲೆಯಾದ ಯುವಕ. ಸಾರಸ್ವತ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ಹಳೇ ವೈಷಮ್ಯಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಸೋಮೇಶ್ವರ ಪುರಸಭೆಗೆ ಡಿಸೆಂಬರ್ 27ರಂದು ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಕೆಲ ದಿನಗಳು ಬಾಕಿ ಉಳಿದಿದ್ದು, ಈ ಕೃತ್ಯಕ್ಕೂ ಚುನಾವಣೆಗೂ ಸಂಬಂಧ ಇರಬಹುದು ಅಂತಾನೂ ಅನುಮಾನಿಸಲಾಗಿದೆ. ಈ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ.