ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಾರಿವಾಳ ಹಿಡಿಯೋ ಭರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಬಾಲಕರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಂದಿನಿ ಲೇಔಟ್ ನಲ್ಲಿ ನಡೆದಿದೆ. ಚಂದ್ರು(10) ಹಾಗೂ ಸಪ್ರೀತ್(12) ಗಾಯಗೊಂಡ ಬಾಲಕರಾಗಿದ್ದಾರೆ.
ಬಾಲಕರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಚಿವ ಗೋಪಾಲಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಸಾಂದರ್ಭಿಕ ಚಿತ್ರ