ಬಿಆರ್ ಎಸ್ ನಾಯಕಿ ಕೆ.ಕವಿತಾಗೆ 14 ದಿನ ನ್ಯಾಯಾಂಗ ಬಂಧನ

90

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಡಿ ವಶದಲ್ಲಿದ್ದ ಬಿಆರ್ ಎಸ್ ನಾಯಕಿ ಕೆ.ಕವಿತಾಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ. ದೆಹಲಿ ಅಬಕಾರಿ ನೀತಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾರ್ಚ್ 15ರಂದು ಬಂಧಿಸಿದ್ದಾರೆ.

ಕವಿತಾ ಕಸ್ಟಡಿ ಅವಧಿಯನ್ನು ಮಾರ್ಚ್ 26ರ ತನಕ ವಿಸ್ತರಿಸಿ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಮಾರ್ಚ್ 23ರಂದು ಆದೇಶಿಸಿದ್ದರು. ಆದರೆ, ಇಡಿ ಕಸ್ಟಡಿ ಅವಧಿ ವಿಸ್ತರಿಸಲು ಕೇಳಿರಲಿಲ್ಲ. ಹೀಗಾಗಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ.

ತೆಲಂಗಾಣದ ಮಾಜಿ ಮುಖ್ಯಮಂತ್ರಿ ಚಂದ್ರಶೇಖರ್ ರಾವ್ ಪುತ್ರಿ ಕೆ.ಕವಿತಾರನ್ನು ಮಾರ್ಚ್ 15ರಂದು ಹೈದ್ರಾಬಾದ್ ನ ನಿವಾಸದಲ್ಲಿ ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!