ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೊಪ್ಪಳದಲ್ಲಿ ಗುರುವಾರ ನಡೆಯುವ ಬಿಜೆಪಿ ಕಾರ್ಯಕ್ರಮ ಹಾಗೂ ಕಚೇರಿ ಉದ್ಘಾಟನೆ ವಿಚಾರಕ್ಕೆ ಸಂಬಂಧಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುನಿಸಿಕೊಂಡಿದ್ದು, ಹೈಕಮಾಂಡ್ ಮನವೊಲಿಸುವಲ್ಲಿ ಯಶಸ್ವಿಯಾಗಿದೆ.
ಕೊಪ್ಪಳದ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಹ್ವಾನಿಸಿರಲಿಲ್ಲ. ಇದರಿಂದ ಮುನಿಸಿಕೊಂಡ ಬಿಎಸ್ವೈ ಇದರಿಂದ ದೂರ ಉಳಿಯಲು ನಿರ್ಧರಿಸಿದ್ದರು. ಯಡಿಯೂರಪ್ಪನವರನ್ನು ಕಡೆಗಣಿಸಲಾಗುತ್ತಿದೆ ಅನ್ನೋ ಮಾತುಗಳು ಕೇಳಿ ಬಂದವು. ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಬಿಎಸ್ವೈ ಭೇಟಿಯಾಗಿ ಮಾತುಕತೆ ನಡೆಸಿದರು.
ಬಿಎಸ್ವೈ ನಡೆಯಿಂದ ಬಿಜೆಪಿಯಲ್ಲಿ ಟೆನ್ಷನ್ ಶುರುವಾಗಿತ್ತು. ನಂತರ ಹೈಕಮಾಂಡ್ ಕರೆ ಮಾಡಿ ನಾಳೆಯ ಕಾರ್ಯಕ್ರಮಕ್ಕೆ ಬರಲು ಆಹ್ವಾನಿಸಿದೆ. ಹೀಗಾಗಿ ಯಡಿಯೂರಪ್ಪ ಕೊಪ್ಪಳದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ.